ಸೋಮವಾರಪೇಟೆ, ಫೆ. 27: ಸಮೀಪದ ಆಲೇಕಟ್ಟೆ ರಸ್ತೆಯಲ್ಲಿರುವ ಖಬರಸ್ಥಾನದಲ್ಲಿ ಇಂದು ಮಧ್ಯಾಹ್ನ ದಿಢೀರ್ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆಯಷ್ಟು ಕುರುಚಲು ಕಾಡು ಸುಟ್ಟುಹೋಗಿದೆ.

ಮಧ್ಯಾಹ್ನದ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಯ ಕೆನ್ನಾಲಿಗೆ ಸುತ್ತಮುತ್ತಲಿನ ಮನೆ, ತೋಟಕ್ಕೆ ಹರಡುವ ಮುನ್ನವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ನೀರು ಹಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ.