ಕುಶಾಲನಗರ, ಮಾ. 10: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಶಾಲನಗರ ಪಟ್ಟಣ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿ ಕೊಂಡಿದ್ದಾರೆ. ಕುಶಾಲನಗರ ಮಾದಾಪಟ್ಟಣದ ಆಟೋಚಾಲಕ ಸತೀಶ, ಪಿರಿಯಾಪಟ್ಟಣದ ತಸನ್ ಬಂಧಿತರು.

ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಠಾಣಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಪಟ್ಟಣದ ಗುಂಡೂರಾವ್ ಬಡಾವಣೆಯ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ಸಂದರ್ಭ ಅಪರಾಧ ಪತ್ತೆ ತಂಡದ ದಯಾನಂದ, ಸಜಿ, ಜೋಸೆಫ್, ಸುಧೀಶ್, ಪ್ರಕಾಶ್ ಇದ್ದರು.