ಸುಂಟಿಕೊಪ್ಪ, ಮಾ. 13: ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನದ ಜೀರ್ಣೋದ್ಧಾರ ಪ್ರಗತಿಯಲ್ಲಿದ್ದು ಕಾಮಗಾರಿ ಅಖೈರುವಾಗದೆ ಇರುವದರಿಂದ ಈ ವರ್ಷ ತೆರೆ ಇರುವದಿಲ್ಲ ತಾ.17 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ,7 .30 ಗಂಟೆಗೆ ಪೂರ್ಣಕುಂಭ ಕಲಶ ಶುದ್ಧಿ ಪುಣ್ಯಾಹ, ಬೆಳಿಗ್ಗೆ 10 ಗಂಟೆಗೆ ಸತ್ಯನಾರಾಯಣ ಪೂಜೆ, ಸಂಜೆ 4.ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ರಾತ್ರಿ 7 ರಿಂದ 9 ರವರೆಗೆ ಶ್ರೀಮುತ್ತಪ್ಪ ದೇವರ ವೆಳ್ಳಾಟಂ ನಡೆಯಲಿದೆ.ತಾ. 19 ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಮತ್ತು ಅನ್ನಸಂತರ್ಪಣೆ ಏರ್ಪಡಿಸ ಲಾಗಿದೆ ಎಂದು ದೇವಾಲಯ ಸಮಿತಿ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.