ಮಡಿಕೇರಿ, ಮಾ. 14 : ಮತದಾನದ ಮಹತ್ವ ಕುರಿತು ಜಾಗೃತಿ ಜಾಥಾಗೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಅಧ್ಯಕ್ಷೆ ಕೆ.ಲಕ್ಷ್ಮಿಪ್ರಿಯಾ ಅವರು ನಗರದ ಗದ್ದುಗೆ ಬಳಿ ಚಾಲನೆ ನೀಡಿದರು.
ಮತದಾನ ನಮ್ಮಿಂದ, ಮತದಾನ ಹೆಮ್ಮೆಯಿಂದ, ಮತ ಹಕ್ಕು ಚಲಾಯಿಸುವದು ಅರ್ಹರದ್ದಾಗಿದೆ, ತಪ್ಪದೇ ಮತ ಚಲಾಯಿಸಿ ಎಂದು ಕೆ.ಲಕ್ಷ್ಮಿಪ್ರಿಯಾ ಅವರು ಕರೆ ನೀಡಿದರು.
ಹದಿನೆಂಟು ವರ್ಷ ಪೂರ್ಣ ಗೊಂಡ ಪ್ರತಿಯೊಬ್ಬರೂ ಮತದಾರರ ಚುನಾವಣಾ ಗುರುತಿನ ಚೀಟಿ ಪಡೆದು ಕಡ್ಡಾಯವಾಗಿ ಮತ ಚಲಾಯಿಸು ವಂತಾಗಬೇಕು. ಜೊತೆಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬದನ್ನು ಖಾತರಿಪಡಿಸಿ ಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
ವಿದ್ಯುನ್ಮಾನ ಮತಯಂತ್ರದಲ್ಲಿ ಕಂಟ್ರೊಲ್ ಯುನಿಟ್ ಮತ್ತು ಬ್ಯಾಲೆಟ್ ಯುನಿಟ್ ಹಾಗೂ ವಿವಿ ಪ್ಯಾಟ್ ಪ್ರಮುಖವಾಗಿದೆ. ವಿವಿ ಪ್ಯಾಟ್ನಿಂದ ಮತವನ್ನು ಯಾರಿಗೆ ಚಲಾಯಿಸಿದ್ದೇವೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ಸಹಕಾರಿಯಾಗಿದೆ. ಆ ದಿಸೆಯಲ್ಲಿ ಅರ್ಹರೆಲ್ಲರೂ ಮತದಾನ ಮಾಡು ವಂತಾಗಬೇಕು ಎಂದು ಕೆ.ಲಕ್ಷ್ಮಿಪ್ರಿಯಾ ಅವರು ಕೋರಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ ಮಾತನಾಡಿ ಪ್ರಜಾಪ್ರಭುತ್ವ ಬಲಪಡಿಸಲು ಏಕೈಕ ಅವಕಾಶ ಮತದಾನವಾಗಿದ್ದು, ಮತದಾನ ಎಂಬ ಅಸ್ತ್ರವನ್ನು ಬಳಸಿಕೊಳ್ಳಬೇಕು. ಯಾವದೇ ಕಾರಣಕ್ಕೂ ಮತದಾ&divound; Àದಿಂದ ವಂಚಿತರಾಗಬಾರ ದೆಂದು ಅವರು ಮನವಿ ಮಾಡಿದರು.
ಪೌರಾಯುಕ್ತ ಎಂ.ಎಲ್. ರಮೇಶ್ ಮಾತನಾಡಿ ಪ್ರಜಾಪ್ರಭುತ್ವದ ಜನತಂತ್ರದ ಹಬ್ಬದಲ್ಲಿ ಮತದಾರರು ಪವಿತ್ರ ಮತದಾನ ಕಾರ್ಯದಲ್ಲಿ ಮತ ಚಲಾಯಿಸಬೇಕು. ಇದರಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಇತರರಿಗೂ ಮಾಹಿತಿ ನೀಡುವಂತಾಗಬೇಕು. ಜೊತೆಗೆ ಅರ್ಹರು ಮತದಾನ ಮಾಡಿದ್ದಾರೆಯೇ ಎಂಬದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿ.ಪಂ.ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ನಗರಸಭೆಯ ಸುಜಾತ, ರಮೇಶ್, ಬಷೀರ್, ಶಿಶು ಅಭಿವೃಧ್ಧಿ ಯೋಜನಾ ಇಲಾಖೆಯ ವ್ಯವಸ್ಥಾಪಕಿ ಸುನಿತಾ, ಮಮ್ತಾಜ್, ಮಂಜುನಾಥ್, ಯಶೋಧ, ಪ್ರಿಯಾ, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಇತರರು ಇದ್ದರು. ಜಾಥಾವೂ ನಗರದ ಮಹದೇವಪೇಟೆ ಮುಖ್ಯರಸ್ತೆ ಮೂಲಕ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಮೂಲಕ ಕಾವೇರಿ ಕಲಾ ಕ್ಷೇತ್ರದಲ್ಲಿ ಕೊನೆಗೊಂಡಿತು.