ಮಡಿಕೇರಿ, ಮಾ.15: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷವನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದ ಸಶಕ್ತವಾಗಿ ಕಟ್ಟಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯ ಗೆಲವಿಗೆ ಶ್ರಮಿಸ ಲಾಗುತ್ತದೆ ಎಂದು ತಿಳಿಸಿರುವ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಪಕ್ಷ ಸಂಘÀಟನೆಯನ್ನು ಮೀರಿ ಪಕ್ಷಕ್ಕೆ ಅಗೌರವವನ್ನು, ಮುಜುಗರವನ್ನು ಉಂಟುಮಾಡುವ ಹಾಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರನ್ನು ಪಕ್ಷದಿಂದಲೇ ಅಮಾನತುಗೊಳಿಸಲಾಗುವದು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ, ಕೀಳು ಮಟ್ಟದ ರಾಜಕೀಯ ಮಾಡುವವನು ನಾನಲ್ಲ, ಮೌಲ್ಯಯುತವಾದ ರಾಜಕೀಯ ಮಾಡುವ ವ್ಯಕ್ತಿ ತಾನೆಂದು ಟೀಕಾಕಾರರಿಗೆ ಪ್ರತ್ಯುತ್ತರ ನೀಡಿದರು. ತಾನು ಬಿಜೆಪಿಯೊಂದಿಗೆ ಶಾಮೀಲಾಗಿದ್ದೇನೆ, ಹಿಂದಿನ ಚುನಾವಣೆಯಲ್ಲಿ ನನ್ನ ಬೂತ್ನಲ್ಲೆ ಜೆಡಿಎಸ್ಗೆ ಮತಗಳಿಲ್ಲ ಎನ್ನುವವರಿಗೆ ಬೂತ್ ಬಗ್ಗೆ ಮಾಹಿತಿ ಇಲ್ಲವೆಂದು ವ್ಯಂಗ್ಯವಾಡಿದರು.
ಯಾವದೇ ಪಕ್ಷದಲ್ಲಿ ನೂತನ ಅಧ್ಯಕ್ಷರ ಆಯ್ಕೆಯ ಸಂದರ್ಭ ವಿರೋಧಗಳು ಸಾಮಾನ್ಯ. ಇಂದು ತನ್ನನ್ನು ವಿರೋಧಿಸುವವರು ಮುಂದೆ ಪಕ್ಷ ಸಂಘಟನೆಯ ಹಂತದಲ್ಲಿ ತನ್ನೊಂದಿಗೆ ಕೈಜೋಡಿಸುವ ವಿಶ್ವಾಸವಿದೆ. ಜಿಲ್ಲೆಯ ಜೆಡಿಎಸ್ ಮುಖ್ಯಸ್ಥರಾದ ಬಿ.ಎ.ಜೀವಿಜಯ ಅವರಿಗೆ ಅವರ ಪುತ್ರ ಸಂಜಯ್ ಜೀವಿಜಯ ಜಿಲ್ಲಾಧ್ಯಕ್ಷನಾಗಬೇಕೆನ್ನುವ ಆಕಾಂಕ್ಷೆ ಇದ್ದಿರಬಹುದು. ಆದರೆ, ನಾನು ಕೇಳದಿದ್ದರೂ
(ಮೊದಲ ಪುಟದಿಂದ) ಪಕ್ಷದ ವರಿಷ್ಟರು ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಇದನ್ನು ಎಲ್ಲರ ಸಹಕಾರದೊಂದಿಗೆ ನಿಭಾಯಿಸುವ ಮೂಲಕ, ಜಿಲ್ಲೆಯಲ್ಲಿ ಪಕ್ಷದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವದಾಗಿ ಸ್ಪಷ್ಟಪಡಿಸಿದರು.
‘ಮರಳಿ ಗೂಡಿ’ಗೆ ಆಂದೋಲನ
ಪ್ರಸ್ತುತ ಜಿಲ್ಲಾ ಜಾತ್ಯತೀತ ಜನತಾ ದಳದಿಂದ ದೂರ ಉಳಿದವರನ್ನು ಮತ್ತೆ ಪಕ್ಷಕ್ಕೆ ಕರೆತರುವ ‘ಮರಳಿ ಗೂಡಿಗೆ’ ಆಂದೋಲನವನ್ನು ನಡೆಸುವ ಮೂಲಕ ಪಕ್ಷದ ಬಲವರ್ಧನೆಗೆ ಮುಂದಾಗುವದಾಗಿ ಕೆ.ಎಂ. ಗಣೇಶ್ ತಿಳಿಸಿದರು.
ತನ್ನನ್ನು ಜಿಲ್ಲಾಧ್ಯಕ್ಷನನ್ನಾಗಿ ಪಕ್ಷದ ವರಿಷ್ಠರು ನಿಯುಕ್ತಿಗೊಳಿಸಿದ ಬಳಿಕ ಜಿಲ್ಲಾ ಜೆಡಿಎಸ್ ಸಮಿತಿ ಸೇರಿದಂತೆ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿರುವದಾಗಿ ಸ್ಪಷ್ಟಪÀಡಿಸಿದ ಗಣೇಶ್, ಶೀಘ್ರದಲ್ಲೆ ಜಿಲ್ಲೆಯ ಐದು ತಾಲೂಕುಗಳ ಅಧ್ಯಕ್ಷರನ್ನು, ವಿವಿಧ ಘಟಕಗಳ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವದೆಂದರು.
ಪಕ್ಷದ ಎಲ್ಲಾ ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷದ ಸಂಘÀಟನೆಯಲ್ಲಿ ತೊಡಗಲಾಗುತ್ತದೆ. ಚುನಾವಣಾ ಹಿನ್ನೆಲೆಯಲ್ಲಿ ಕೊಡ್ಲಿಪೇಟೆ ವಿಭಾಗದಿಂದ ಪಕ್ಷದ ಸಭೆಗಳನ್ನು ಆರಂಭಿಸಿ, ಜಿಲ್ಲೆಯ ವಿವಿಧೆಡೆಗಳಲ್ಲಿ ಸಭೆಗಳನ್ನು ಆಯೋಜಿಸುವ ಮೂಲಕ ಸಂಘÀಟನಾ ಕಾರ್ಯದಲ್ಲಿ ತೊಡಗುವದಾಗಿ ತಿಳಿಸಿದ ಅವರು, ತಾನು ಕಾರ್ಯಕರ್ತರ ನಡುವೆಯೇ ಇದ್ದುಕೊಂಡು ಕಾರ್ಯನಿರ್ವಹಿಸಲು ಇಚ್ಛಿಸುವ ವ್ಯಕ್ತಿಯೆಂದು ತಿಳಿಸಿದರು. ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿಯನ್ನು ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸಿ ಕಳುಹಿಸಲಾಗುವದು. ಎಲ್ಲರ ಸಹಕಾರ ಅಗತ್ಯವೆಂದರು.
ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ತಮ್ಮ ಆರು ದಶಕಗಳ ರಾಜಕೀಯದಲ್ಲಿ ಎಂದಿಗೂ ದುಡುಕಿ ನಿರ್ಧಾರಗಳನ್ನು ಕೈಗೊಂಡಿಲ್ಲ. ಈಗಲೂ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಬಗ್ಗೆ ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿ ಕೆ.ಎಂ.ಗಣೇಶ್ ಅವರನ್ನು ಆಯ್ಕೆಮಾಡಿದ್ದು, ಇದು ತರಾತುರಿಯ ನಿರ್ಧಾರವೂ ಅಲ್ಲವೆಂದು ಹೇಳಿದರು.
ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕಳುಹಿಸುವ ಜವಬ್ದಾರಿ ತಮ್ಮ ಮೇಲಿದೆ ಎಂದರು. ಜಿಲ್ಲಾ ಯುವ ಘಟಕ ಅಧ್ಯಕ್ಷ ಚೆಟ್ಟಡ್ಕ ವಿಶ್ವ ಮಾತನಾಡಿ ನೂತನ ಅಧ್ಯಕ್ಷರಿಗೆ ಯುವ ಘಟಕದಿಂದ ಎಲ್ಲಾ ರೀತಿಯ ಬೆಂಬಲ ನೀಡಲಾಗುವದು ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ವೀರಾಜಪೇಟೆ ಕ್ಷೇತ್ರದ ಅಧ್ಯಕ್ಷ ಮತೀನ್, ಪ್ರಧಾನ ಕಾರ್ಯದರ್ಶಿ ಜಾಸಿರ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಪಾರೆಮಜಲು ಕುಸುಮ ಉಪಸ್ಥಿತರಿದ್ದರು.