ನಾಪೆÇೀಕ್ಲು, ಮಾ. 20: ಸಮೀಪದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವವು ವಿಜೃಂಭಣೆ ಯಿಂದ ನೆರವೇರಿತು.
ಬುಧವಾರ ಬೆಳಿಗ್ಗೆ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೆÇೀರಾಟ ಮತ್ತು ಬಲಿವಾಡುವಿನ ಆಗಮನದಿಂದ ದೇವಳದಲ್ಲಿ ಉತ್ಸವ ಆರಂಭಗೊಂಡಿತು. ಅದರೊಂದಿಗೆ ಇನ್ನಿತರ ತಕ್ಕಮುಖ್ಯಸ್ಥರ ಎತ್ತು ಪೆÇೀರಾಟ ಸೇವೆಗಳೂ ಸಂಪ್ರದಾಯ ದಂತೆ ನಡೆಯಿತು. ನಂತರ ಭಕ್ತರ ತುಲಾಭಾರ ಸೇವೆಗಳು, ಮಧ್ಯಾಹ್ನದ ಮಹಾಪೂಜೆಯ ನಂತರ ಸಾರ್ವಜನಿಕ ಅನ್ನಸಂತರ್ಪಣೆ, ಅಪರಾಹ್ನ ಇಗ್ಗುತ್ತಪ್ಪ ದೇವರ ಉತ್ಸವ ಮೂರ್ತಿಯೊಂದಿಗೆ ಐದು ಕಿ.ಮೀ. ದೂರದ ಆದಿ ಸ್ಥಳ ಮಲ್ಮ ಬೆಟ್ಟಕ್ಕೆ ತೆರಳಿ ಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಮೀಪದ ನೆಲಜಿ ಇಗ್ಗುತ್ತಪ್ಪ ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಪೇರೂರು ಇಗ್ಗುತ್ತಪ್ಪ ದೇವಾಲಯದ ತಕ್ಕಮುಖ್ಯಸ್ಥರು ಭಕ್ತಾದಿಗಳು ಎತ್ತಪೆÇೀರಾಟದೊಂದಿಗೆ ಮಲ್ಮ ಬೆಟ್ಟದಲ್ಲಿ ಹಾಜರಿದ್ದರು. ಮೂರು ಇಗ್ಗುತ್ತಪ್ಪ ದೇವಾಲಯಗಳ ತಕ್ಕ ಮುಖ್ಯಸ್ಥರ ಉಪಸ್ಥಿತಿಯಲ್ಲಿ ದೈವಿಕ ವಿಧಿವಿಧಾನಗಳು ನೈವೇಧ್ಯ, ಪೂಜೆ, ಹರಕೆ ಸೇವೆಗಳನ್ನು ನೆರವೇರಿಸಿ ದೇವ ಕಟ್ಟನ್ನು ಹಿಂತೆಗೆಯಲಾಯಿತು. ರಾತ್ರಿ ದೇವಾಲಯದಲ್ಲಿ ಉತ್ಸವ ಮೂರ್ತಿಯ ನೃತ್ಯೋತ್ಸವದೊಂದಿಗೆ ವಾರ್ಷಿಕೋತ್ಸವ ಸಂಪನ್ನಗೊಂಡಿತು.
ದೈವಿಕ ವಿಧಿವಿಧಾನಗಳನ್ನು ವೇಧ ಮೂರ್ತಿಗಳಾದ ಕುಶ ಭಟ್, ಲವ ಭಟ್, ಮತ್ತು ಸಂಗಡಿಗರು ನೆರವೇರಿಸಿ ದರು. ಈ ಸಂದರ್ಭದಲ್ಲಿ ದೇವಳಕ್ಕೆ ಸಂಬಂಧಿಸಿದ ಎಲ್ಲಾ ತಕ್ಕಮುಖ್ಯಸ್ಥರು, ದೇವಳದ ವ್ಯವಸ್ಥಾಪನಾ ಸಮಿತಿ, ಭಕ್ತಜನ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಭಕ್ತಾದಿಗಳು ಹಾಜರಿದ್ದರು.
ನೆಲಜಿ ಇಗ್ಗುತ್ತಪ್ಪ ದೇವಳದಲ್ಲಿಯೂ ಹಬ್ಬ: ನೆಲಜಿ ಇಗ್ಗುತ್ತಪ್ಪ ದೇವಳದಲ್ಲಿಯೂ ಕುಂಬ್ಯಾರು ಕಲಾಡ್ಚ ಹಬ್ಬದ ಪ್ರಯುಕ್ತ ಎತ್ತು ಪೆÇೀರಾಟ, ತುಲಾಭಾರ ಸೇವೆ, ಮಹಾಪೂಜೆ, ದೇವರಬಲಿ, ಅನ್ನಸಂತರ್ಪಣೆ ನಡೆಯಿತು.
ದೈವಿಕ ವಿಧಿ ವಿಧಾನಗಳನ್ನು ರಮೇಶ್ ಶರ್ಮ, ಸುರೇಶ್ ಶರ್ಮ, ಸಂತೋಷ್ ಹೆಬ್ಬಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳಕ್ಕೆ ಸಂಬಂಧಿಸಿದ ಎಲ್ಲಾ ತಕ್ಕಮುಖ್ಯಸ್ಥರು, ಭಕ್ತಜನ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು, ಭಕ್ತಾಧಿಗಳು ನೆರದಿದ್ದರು.