ಮಡಿಕೇರಿ, ಮಾ.21 :ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಯಾಗ ದಂತೆ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯಾಧಿ ಕಾರಿಗಳಿಗೆ ಜಿಲ್ಲಾಧಿ ಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೊಡಗು ಜಿಲ್ಲಾ ವೈದ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈದ್ಯರಿಲ್ಲದ ಆಸ್ಪತ್ರೆಗಳಿಗೆ ಆಯುಷ್ ವೈದ್ಯರನ್ನು ನಿಯೋಜಿಸುವಂತೆ ಸಲಹೆ ಮಾಡಿದರು. ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ದೊರೆಯಬೇಕು. ಯಾವದೇ ರೀತಿಯ ದೂರುಗಳು ಕೇಳಿ ಬರಬಾರದು.ಜಿಲ್ಲೆಯ ಕುಟ್ಟ ಸಮುದಾಯ ಆಸ್ಪತ್ರೆ ಸೇರಿದಂತೆ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆ ಯಾಗಿದೆ. ಆದ್ದರಿಂದ ಹೆಚ್ಚುವರಿ ವೈದ್ಯರನ್ನು ನಿಯೋಜಿ ಸುವಂತೆ ಜಿಲ್ಲಾಧಿಕಾರಿ ಸೂಚಿಸಿ ದರು. ಸದ್ಯ ಜಿಲ್ಲೆಯ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಬೇಕು. ವೈದ್ಯರಿಗೆ ತುಟ್ಟಿಭತ್ಯೆ ಮತ್ತು ಪ್ರಯಾಣ ಭತ್ಯೆ ನೀಡಲು ಆದೇಶದಲ್ಲಿಯೇ ನಮೂದಿಸಬೇಕು.ವೈದ್ಯರ ಕೊರತೆ ಇರುವ ಸಮುದಾಯ ಆಸ್ಪತ್ರೆಗಳಿಗೆ ವೈದ್ಯರನ್ನು ನಿಯೋಜಿಸುವದರ ಜೊತೆಗೆ ಎಲ್ಲಾ ವೈದ್ಯರನ್ನು ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು. ತಾರತಮ್ಯ ಅನುಸರಿಸ ಬಾರದು. ಚುನಾವಣೆ ಮುಗಿದ ನಂತರ ಮಳೆಗಾಲ ಆರಂಭ ವಾಗುತ್ತದೆ. ಆದ್ದರಿಂದ ವಿಪತ್ತು ಎದುರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಜ್ಜಾಗಬೇಕಿದೆ. ಆ ನಿಟ್ಟಿನಲ್ಲಿ ಈಗಿನಿಂದಲೇ ಯೋಜನೆ ರೂಪಿಸ ಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್

(ಮೊದಲ ಪುಟದಿಂದ) ಜಿಲ್ಲೆಯಲ್ಲಿ ತಜ್ಞ ವೈದ್ಯರ 20 ಹುದ್ದೆಗಳು, 9 ಸಾಮಾನ್ಯ ವೈದ್ಯರು, ಒಬ್ಬರು ದಂತ ವೈದ್ಯರು ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು. ಸಮುದಾಯ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಈ ಆಸ್ಪತ್ರೆಗಳಿಗೆ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲು ಪ್ರಯತ್ನಿಸ ಲಾಗಿದೆ ಎಂದು ತಿಳಿಸಿದರು. ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು, ಮತ್ತೊಬ್ಬ ವೈದ್ಯರು ಆಸ್ಪತ್ರೆಗೆ ಬಂದ ನಂತರ ತೆರಳಬೇಕು. ಆ ನಿಟ್ಟಿನಲ್ಲಿ ತಾಲೂಕು ವೈದ್ಯಾಧಿಕಾರಿ ಗಳು ಗಮನಹರಿಸು ವಂತಾಗಬೇಕು ಎಂದು ತಿಳಿಸಿದರು.

ವಿಪತ್ತು ನಿರ್ವಹಣೆ ಸಂಬಂಧ ಈಗಾಗಲೇ ಯೋಜನೆ ರೂಪಿಸ ಲಾಗುತ್ತಿದ್ದು, ಮಡಿಕೇರಿ ತಾಲೂಕಿಗೆ 3, ಸೋಮವಾರಪೇಟೆ 2 ಮತ್ತು ವೀರಾಜಪೇಟೆ ತಾಲೂಕಿನಲ್ಲಿ 1 ತಂಡ ನಿಯೋಜಿಸಲಾಗುತ್ತದೆ. ಹಾಗೆಯೇ ಮೈಸೂರು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಿಕೊಳ್ಳಲಾಗುವದು ಎಂದು ಮಾಹಿತಿ ನೀಡಿದರು. ತಾಲೂಕು ವೈದ್ಯಾಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್, ಡಾ.ಯತಿರಾಜು, ಡಾ.ಶ್ರೀನಿವಾಸ್, ಕಾರ್ಯಕ್ರಮ ಅಧಿಕಾರಿಗಳಾದ ಡಾ.ಆನಂದ್, ಡಾ.ಶಿವಕುಮಾರ್, ವಿವಿಧ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಇತರರು ಇದ್ದರು.