ಮಡಿಕೇರಿ, ಮಾ. 21: ಕೊಡವರ ಸಂಸ್ಕೃತಿ ಆಚಾರ ವಿಚಾರವನ್ನು ಅರಿತು ಕೊಡವ ಸಮುದಾಯಕ್ಕೆ ಬುಡಕಟ್ಟು ಸ್ಥಾನಮಾನ ನೀಡಲೇ ಬೇಕಿದೆ ಎಂದು ರಾಜಕೀಯ ವಿಜ್ಞಾನಿ ಪ್ರೊ.ಬಲವೀರ್ ಅರೋರ ಹೇಳಿದರು.ನಗರದ ಕ್ಯಾಪಿಟಲ್ ವಿಲೇಜ್ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಜನಾಂಗೀಯ ತಾರತಮ್ಯ ದಿನಾಚರಣೆಯ ಅಂಗವಾಗಿ `ಕೊಡವ ಬುಡಕಟ್ಟು ಕುಲಶಾಸ್ತ್ರ ಅಧ್ಯಯನ' ವಿಚಾರ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕೊಡವ ಜನಾಂಗದ ಬೇಡಿಕೆ ಯಂತೆ ಕೊಡವ ಕುಲಶಾಸ್ತ್ರ ಅಧ್ಯಯ ನವನ್ನು ಸರ್ಕಾರ ಕೈಗೆತ್ತಿಕೊಂಡಿ ರುವದು ಶ್ಲಾಘನೀಯ. ಕೊಡವ ಜನಾಂಗದ ಉಳಿವು ಮತ್ತು ಪರಂಪರೆಯ ಬೆಳವಣಿಗೆಗೆ ಕುಲಶಾಸ್ತ್ರ ಅಧ್ಯಯನ ಪೂರಕವಾಗಿದೆ ಎಂದು ಹೇಳಿದರು.ಕೊಡವರ ಸಾಂಪ್ರದಾಯ ಮತ್ತು ಸಂಸ್ಕೃತಿ ಬುಡಕಟ್ಟು ಜನರಂತೆ ಹೋಲುತ್ತದೆ. ಮೊದಲ ಹಂತವಾಗಿ ಬುಡಕÀಟ್ಟು ಜನರನ್ನು ಗುರುತಿಸುವ ಕೆಲಸ ಸರ್ಕಾರ ಮಾಡಬೇಕು. ಹಲವಾರ ವರ್ಷಗಳಿಂದ ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಗೆ ಮನ್ನಣೆ ಸಿಗಬೇಕಿದೆ ಎಂದು ಆಗ್ರಹಿಸಿದರು.

ಸಂವಿಧಾನ ಕಾಯ್ದೆಯಡಿ ಜನಾಂಗೀಯ ಮೊದಲ ಪುಟದಿಂದ) ಸಮೀಕ್ಷೆ ಮಾಡುವ ಮೂಲಕ ಆರ್ಥಿಕತೆ ಮತ್ತು ಸಾಮಾಜಿಕ ಕಾರಣಗಳಿಂದಾಗಿ ಹಲವಾರು ವರ್ಷಗಳಿಂದ ಕ್ಷೀಣಿಸುತ್ತಿರುವ ಕೊಡವ ಸಮುದಾಯವನ್ನು ಉಳಿಸಿಕೊಳ್ಳುವದು ಅಗತ್ಯವಾಗಿದೆ; ಭವಿಷ್ಯದ ದೃಷ್ಟಿಯಿಂದ ಯುವ ಜನಾಂಗಕ್ಕೆ ಆಚಾರ ವಿಚಾರದ ಬಗೆಗಿನ ಅರಿವು ಮೂಡಿಸುವದಕ್ಕಾಗಿ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದಷ್ಟು ಶೀಘ್ರದಲ್ಲಿ ಕೊಡವ ಕುಲಶಾಸ್ತ್ರ ಅಧ್ಯಯನ ಪೂರ್ಣಗೊಳಿಸಿ ಕೊಡವ ಜನಾಂಗದ ಸಾಮಾಜಿಕ ಭದ್ರತೆಗೆ ಸಹಕರಿಸಬೇಕಿದೆ ಎಂದು ಮನವಿ ಮಾಡಿದರು.

ಸಿಎನ್‍ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಮಾತನಾಡಿ, ಮೈಸೂರು ಬುಡಕಟ್ಟು ಸಂಶೋಧನಾ ಸಂಸ್ಥೆ ಅಧ್ಯಯನ ನಡೆಸುತ್ತಿದ್ದು, ಈಗಾಗಲೇ 72 ದಿನಗಳು ಆಗಿವೆ, ಜನಾಂಗ ಬಾಂಧವರು ಸರ್ವೆ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಿಎನ್‍ಸಿಯ ನಿರಂತರ ಹೋರಾಟದಿಂದ ರಾಜ್ಯ ಸರ್ಕಾರ ಜನಾಂಗೀಯ ಸಮೀಕ್ಷೆ ಮತ್ತು ಸಾಮಾಜಿಕ ಆರ್ಥಿಕತೆ ಸರ್ವೆ ಕಾರ್ಯಕ್ಕೆ ಶಿಫಾರಸ್ಸು ಮಾಡಿದೆ ಈ ಬಗ್ಗೆ ಜನಾಂಗ ಬಾಂಧವರು ಎಚ್ಚೆತ್ತು ಸಮೀಕ್ಷೆಗೆ ಸಹಕರಿಸಬೇಕಿದೆ; ರಾಜಕೀಯ ಕಾರಣದಿಂದಾಗಿ ಅಧ್ಯಯನವನ್ನು ತಡೆ ಹಿಡಿಯಲಾಯಿತು. ಸಮಾಜ ಕಲ್ಯಾಣ ಸಚಿವಾಲಯವು ಈ ಸರ್ವೆ ಕಾರ್ಯದ ಕೆಲಸವನ್ನು ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ವಹಿಸಲಾಗಿದ್ದು, ಈ ಸಂಬಂಧ ಅನುದಾನ ಕೂಡ ಬಿಡುಗಡೆ ಮಾಡಿದೆ ಎಂದು ನಾಚಪ್ಪ ತಿಳಿಸಿದರು.

ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಎಂ.ಟಿ, ನಾಣಯ್ಯ ಮಾತನಾಡಿ, ಸರ್ವೆ ಕಾರ್ಯಕ್ಕೆ ಕೊಡವ ಸಮಾಜದ ವತಿಯಿಂದ ನೆರವು ನೀಡಲಾಗುವದು. ಈ ಬಗ್ಗೆ ಸಿಎನ್‍ಸಿ ವತಿಯಿಂದ ಅರಿವು ಕಾರ್ಯಕ್ರಮ ಏರ್ಪಡಿಸಲಾಗುವದು ಎಂದು ತಿಳಿಸಿದರು.

ಕೊಡವ ಸಮುದಾಯದವರು ಸುಮಾರು ಜಿಲ್ಲೆಯಲ್ಲಿ 1 ಲಕ್ಷ ಮಂದಿ ಇದ್ದಾರೆ, ಕೊಡವ ಸಮುದಾಯದವರೆಲ್ಲ ಶ್ರೀಮಂತರು, ಕೃಷಿಕರು ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ, ಆದರೆ, ಕೊಡವ ಸಮುದಾಯದಲ್ಲಿ ಬಹುತೇಕ ಮಂದಿ ಬಡವರಿದ್ದಾರೆ ಇಂತವರಿಗೆ ಸರ್ಕಾರದ ಸೌಲಭ್ಯ ಸಿಗಬೇಕಿದೆ.

ಕೆಲವು ಹಿಂದುಳಿದ ಜನಾಂಗಕ್ಕೆ ಸಿಗುತ್ತಿರುವ ಶಿಕ್ಷಣ, ಉದ್ಯೋಗ ಮೀಸಲಾತಿ ಎಲ್ಲರಿಗೂ ಸಿಗಬೇಕು ಆ ನಿಟ್ಟಿನಲ್ಲಿ ಕುಲಶಾಸ್ತ್ರ ಅಧ್ಯಯನ ಪೂರಕವಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಕೂಪದಿರ ಉತ್ತಪ್ಪ ಮಾತನಾಡಿ, ಸಮಾನತೆಯ ಸಮಾಜ ಬೇಕಿದೆ, ಕೊಡವ ಜನಾಂಗಕ್ಕೆ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಈ ನಡುವೆ ಪ್ರಕೃತಿ ವಿಕೋಪ, ಮಹಾ ಮಳೆಯಿಂದಾಗಿ ಆಗಿರುವ ದುರಂತಗಳಿಂದ ಆರ್ಥಿಕ ಮುಗ್ಗಟ್ಟು ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮೈಸೂರು ಬುಡಕಟ್ಟು ಸಂಶೋಧನಾ ಸಂಸ್ಥೆಯ ಡಾ. ಮದುಸೂಧನ್, ಡಾ. ನವೀನ್, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ, ಪುಲ್ಲೆರ ಸ್ವಾತಿ ಕಾರ್ಯಪ್ಪ, ಮೀನಾ ಹಾಜರಿದ್ದರು.