ಕೂಡಿಗೆ, ಮಾ. 21: ಕೂಡಿಗೆ ಡೈರಿಯಲ್ಲಿ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು ನಿವೃತ್ತಿ ಹೊಂದಿದ ಪಾಪು ಅವರಿಗೆ ಡೈರಿಯ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲಾ ನಿರ್ದೇಶಕ ಕೆ.ಟಿ. ಅರುಣ್‍ಕುಮಾರ್ ಅವರು ಪಾಪು ಅವರನ್ನು ಗೌರವಿಸಿದರು. ಡೈರಿಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವರ್ಗ ಇದ್ದರು.