ಮಡಿಕೇರಿ, ಮಾ. 26: 2019 ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿಗಳಿಗಾಗಿ ನೇಮಕಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿ ತಾ. 28ರಂದು ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ; ಮೊದ ಹಂತದ ತರಬೇತಿ ನಡೆಯುತ್ತಿದ್ದು, ತಮ್ಮ ಖeಛಿeiಠಿeಟಿಣ I.ಆ. ಬ್ಯಾಂಕ್ ಖಾತೆ ಸಂಖ್ಯೆ IಈSಅ ಅoಜeನೊಂದಿಗೆ) ಮತದಾರರ ಗುರುತಿನ ಚೀಟಿ ಸಂಖ್ಯೆಯ ಮಾಹಿತಯೊಂದಿಗೆ ತರಬೇತಿಗೆ ಹಾಜರಾಗಬೇಕು. ತರಬೇತಿಗೆ ಗೈರು ಹಾಜರಾಗುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ 1951ರ ಪ್ರಕಾರ ಕ್ರಮ ಕೈಗೊಳ್ಳಲಾಗುವದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.