ಸಿದ್ದಾಪುರ, ಮಾ. 27: ಪಾಲಿಬೆಟ್ಟ ಗ್ರಾ.ಪಂ .ಪಿ.ಡಿ.ಓ ಎ.ಎ. ಅಬ್ದುಲ್ಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೊದ್ದೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಳಿಸಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಬ್ದುಲ್ಲಾ ಅವರು ಒಂದು ರಾಜಕೀಯ ಪಕ್ಷಕ್ಕೆ ಪರೋಕ್ಷವಾಗಿ ಬೆಂಬಲ ನೀಡುವ ದಲ್ಲದೆ ಕೆಲವು ಆಡಳಿತಾತ್ಮಕ ವಿಚಾರಗಳಲ್ಲಿ ಏಕಪಕ್ಷಿಯವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿ ದ್ದಾರೆ ಎಂದು ಆರೋಪಿಸಿ ಪಾಲಿಬೆಟ್ಟ ನಿವಾಸಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆಯಲ್ಲಿ ಇದೀಗ ಅಬ್ದುಲ್ಲಾ ಅವರನ್ನು ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.