ಸುಂಟಿಕೊಪ್ಪ, ಮಾ. 28: ಸುಂಟಿಕೊಪ್ಪ ಬ್ರಹ್ಮಶ್ರೀ ಸ್ವ ಸಹಾಯ ಸಂಘದ 5ನೇ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಶ್ರೀ ಕೋದಂಡ ರಾಮ ಮಂದಿರದಲ್ಲಿ ನಡೆದ 5ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಗಣೇಶ್ ಉಪಾದ್ಯಾಯ, ರಾಧಾಕೃಷ್ಣ ಕೆದಲಾಯ, ದರ್ಶನ್ ಭಟ್ ಅವರ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿ ಮಹಾ ಮಂಗಳಾರತಿಯೊಂದಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ನಂತರ ನೆರೆದವರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.