ವೀರಾಜಪೇಟೆ, ಮಾ. 30: ಲೋಕಸಭಾ ಚುನಾವಣೆಯ ಹಿನ್ನೆಲೆ ವೀರಾಜಪೇಟೆ ತಾಲೂಕಿನ ಮತಗಟ್ಟೆಗಳ ಅಧಿಕಾರಿಗಳಿಗೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್, ಚುನಾವಣಾ ಜಿಲ್ಲಾ ನೋಡಲ್ ಅಧಿಕಾರಿ ಷಂಶುದ್ದೀನ್ ಹಾಗೂ ಇತರ ಅಧಿಕಾರಿಗಳು ಮೊದಲನೆ ಹಂತದ ತರಬೇತಿ ಕಾರ್ಯಾಗಾರ ನಡೆಸಿದರು.

ಈ ಸಂದರ್ಭ ತಹಶೀಲ್ದಾರ್ ಗೋವಿಂದರಾಜು ಮಾತನಾಡಿ, ಮತಗಟ್ಟೆ ಅಧಿಕಾರಿಗಳಿಗೆ ಚುನಾವಣೆ ಸಂಬಂಧ ಮೊದಲನೆಯ ಹಂತದ ತರಬೇತಿಗಾಗಿ ಇಲ್ಲಿನ ಸಭಾಂಗಣ ಸೇರಿ 5 ಕೊಠಡಿಗಳಲ್ಲಿ ತರಬೇತಿ ನೀಡಲಾಗುತ್ತಿದ್ದು. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಎರಡನೇ ಹಂತದ ತರಬೇತಿ ನಡೆಯಲಿದೆ ಎಂದರು. ಕಾರ್ಯಾಗಾರದಲ್ಲಿ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.