ಸೋಮವಾರಪೇಟೆ, ಮಾ. 30: ಇಲ್ಲಿನ ಬಸವೇಶ್ವರ ದೇವಾಲಯ, ವೀರಶೈವ ಸಮಾಜ ವತಿಯಿಂದ ಸ್ಥಳೀಯ ಮಹದೇಶ್ವರ ಬಡಾವಣೆಯಲ್ಲಿರುವ ಶ್ರೀ ಮಹದೇಶ್ವರ ಬನದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಲಾಯಿತು.

ವಿರಕ್ತ ಮಠಾಧೀಶ ವಿಶ್ವೇಶ್ವರ ಸ್ವಾಮೀಜಿ, ಬಸವೇಶ್ವರ ದೇವಾಲಯ ಅರ್ಚಕ ಮಿಥುನ್ ಶಾಸ್ತ್ರೀ ಅವರುಗಳ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ವೀರಶೈವ ಸಮಾಜದ ಯಜಮಾನ ಕೆ.ಎನ್. ಶಿವಕುಮಾರ್, ಶೆಟ್ರು ಕೆ.ಎನ್. ತೇಜಸ್ವಿ, ಕಾರ್ಯದರ್ಶಿ ಜೆ.ಸಿ. ಶೇಖರ್ ಸೇರಿದಂತೆ ಇತರರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.