ಸೋಮವಾರಪೇಟೆ,ಮಾ.31: ಇಫ್ಕೋ ಸಂಸ್ಥೆಯ ಆರ್.ಜಿ.ಬಿ. ನಿರ್ದೇಶಕರಾಗಿ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ನಿರ್ದೇಶಕರಾದ ಎಂ.ಎಸ್. ಲಕ್ಷಿಕಾಂತ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಕೊಡಗು, ಮೈಸೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ನಡೆದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಕೊಡಗು ಜಿಲ್ಲೆಯಿಂದ ಲಕ್ಷ್ಮಿಕಾಂತ್ ಅವಿರೋಧವಾಗಿ ಆಯ್ಕೆಯಾದರು.

ಪ್ರಮಾಣಪತ್ರವನ್ನು ಇಫ್ಕೋ ಸಂಸ್ಥೆಯ ರಾಜ್ಯ ನಿರ್ದೇಶಕ, ಶಾಸಕ ಶ್ರೀನಿವಾಸ್ ಗೌಡ ವಿತರಿಸಿದರು. ಈ ಸಂದರ್ಭ ಸೋಮವಾರಪೇಟೆ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕೆ.ಜಿ. ಸುರೇಶ್, ಇಫ್ಕೋ ಸಂಸ್ಥೆಯ ನಿರ್ದೇಶಕರುಗಳಾದ ಎಂ.ಬಿ. ಪಾಟಿಲ್, ಶಂಕರೇಗೌಡ, ಸತೀಶ್, ಹನುಮಂತು, ರಾಜೇಗೌಡ, ರಘು ಸೇರಿದಂತೆ ಇನ್ನಿತರರು ಹಾಜರಿದ್ದರು.