ಸೋಮವಾರಪೇಟೆ,ಮಾ.31: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ಕಚೇರಿಯಲ್ಲಿ ದಿ. ಜನರಲ್ ತಿಮ್ಮಯ್ಯರವರ 113ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.

ತಿಮ್ಮಯ್ಯರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಬಿ.ಆರ್. ಈರಪ್ಪ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಮಾತನಾಡಿ, ತಿಮ್ಮಯ್ಯರವರ ಆದರ್ಶಗಳನ್ನು ಎಲ್ಲರೂ ಪಾಲಿಸುವ ಮೂಲಕ ದೇಶದ ಆದರ್ಶ ಪ್ರಜೆಯಾಗಬೇಕೆಂದು ಹೇಳಿದರು.ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಆರ್.ಜಿ. ಬಸಪ್ಪ, ಸುಕುಮಾರ್, ಮಹೇಶ್, ತಮ್ಮಯ್ಯ, ದೇವಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.