ಗುಡ್ಡೆಹೊಸೂರು, ಏ. 2: ಇಲ್ಲಿಗೆ ಸಮೀಪದ ರಂಗಸಮುದ್ರ ಗ್ರಾಮದ ಶ್ರೀ ಕುರುಂಭ ಭಗವತಿ ದೇವಸ್ಥಾನದ 21ನೇ ವಾರ್ಷಿಕ ಮಹಾಪೂಜೆಯು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಲಶ ಅಭಿಷೇಕ, ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಸಲಾಯಿತು. ಶ್ರೀ ಮುತ್ತಪ್ಪ ವೆಳ್ಳಾಟಂ, ತಾಲಪೊಲಿ, ಗುರುಧಿ ದರ್ಪಣಂ ನಡೆದವು. ಪೂಜಾ ಕಾರ್ಯಕ್ರಮದಲ್ಲಿ ಗ್ರಾಮದ ನೂರಾರು ಮಂದಿ ಭಾಗವಹಿಸಿದ್ದರು.