ಮಡಿಕೇರಿ, ಏ.5 : ನಗರದ ಹೊರ ವಲಯದ ಕರ್ಣಂಗೇರಿ ಗ್ರಾಮದ ಶ್ರೀರಾಜರಾಜೇಶ್ವರಿ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಗುಡಿಯಲ್ಲಿ ಯುಗಾದಿಯ ತಾ. 6 ರಂದು (ಇಂದು) ಶ್ರೀ ವೆಂಕಟರಮಣ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ತಿಳಿಸಿದ್ದಾರೆ.

ಕಳಸ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ. ಇದೇ ಸಂದರ್ಭ ಕಾಶಿಯಿಂದ ತರಲಾದ ತೀರ್ಥ ಸಹಿತ ಭಕ್ತಾಧಿಗಳ 108 ಕುಂಭ ಕಲಶದ ತೀರ್ಥವನ್ನು ವೆಂಕಟರಮಣ ಸ್ವಾಮಿಗೆ ಅಭಿಷೇಕ ಮಾಡಲಾಗುವದು. ಬಳಿಕ ಮಹಾಗಣಪತಿ ಹೋಮದೊಂದಿಗೆ ಪೂಜಾ ಕೈಂಕರ್ಯಗಳು ನಡೆಯಲಿದೆ.