ಮಡಿಕೇರಿ, ಏ. 11: ಸಮಾಜಮುಖಿ ಕನ್ನಡ ಮಾಸಿಕ ಹಾಗೂ ಪ್ರಜಾಸತ್ಯ ಪತ್ರಿಕೆ ಮತ್ತು ಪ್ರೆಸ್‍ಕ್ಲಬ್ ಆಶ್ರಯದಲ್ಲಿ ತಾ. 12ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಪತ್ರಿಕಾಭವನ ಸಭಾಂಗಣದಲ್ಲಿ ‘ಸಮಾಜಮುಖಿ’ ಬಿಡುಗಡೆ ಹಾಗೂ ನಡಿಗೆಗೆ ಚಾಲನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅರಮೇರಿ - ಕಳಂಚೇರಿ ಮಠಾಧೀಶರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಿಡುಗಡೆ ಮಾಡುವರು.

ಅತಿಥಿಗಳಾಗಿ ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಜಾಸತ್ಯ ಪತ್ರಿಕೆ ಸಂಪಾದಕ ಡಾ. ಬಿ.ಸಿ. ನವೀನ್ ಕುಮಾರ್ ಉಪಸ್ಥಿತರಿರುವರು.