ನಾಪೋಕ್ಲು: ಏ. 17: ಶಿಸ್ತು ಮತ್ತು ಸಂಯಮ ಕಾಪಾಡಿಕೊಳ್ಳುವದರ ಮೂಲಕ ಸಾಧನೆ ಮಾಡಬೇಕು ಎಂದು ಡಿಎಫ್‍ಓ ಮುಕ್ಕಾಟಿರ ಜಯ ಹೇಳಿದರು. ನಾಪೋಕ್ಲು ಕೊಡವ ಸಮಾಜದಲ್ಲಿ ಕ್ರೀಡೆ, ಸಾಂಸ್ಕøತಿಕ ಮತ್ತು ಮನರಂಜನಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕೊಡವ ಓಪನ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಖ್ಯಾತ ಸೈಕ್ಲಿಂಗ್ ಕೋಚ್ ಚರಿನ್ ಚರ್ಮಣ ಗ್ರಾಮೀಣ ಮಕ್ಕಳಲ್ಲಿ ಇರುವ ಪ್ರತಿಭೆಗಳ ಅನಾವರಣಕ್ಕೆ ಇಂತಹ ಪಂದ್ಯಾವಳಿ ಸಹಕಾರಿಯಾಗಿದೆ ಎಂದು ಆಶಿಸಿದರು.

ಸಮಿತಿ ಅಧ್ಯಕ್ಷ ಕಾಂಡಂಡ ಜೋಯಪ್ಪ ಮಾತನಾಡಿ ಈಚೆಗೆ ಶಟಲ್ ಬ್ಯಾಡ್ಮಿಂಟನ್ ಸಾಕಷ್ಟು ಪ್ರಚಲಿತದಲ್ಲಿದ್ದು, ಕ್ರೀಡಾಪಟುಗಳು ಸದುಪಯೋಗಪಡಿಸಿಕೊಳ್ಳಬೇಕು. ನಾಪೋಕ್ಲುವಿನಲ್ಲಿ ಈಗಾಗಲೇ ಶಟಲ್ ಬ್ಯಾಡ್ಮಿಂಟನ್ ಕೋರ್ಟ್ ರಚಿಸಲಾಗಿದ್ದು, ಗ್ರಾಮದ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳ ಬೇಕು ಎಂದರು.

ಪ್ರಮುಖ ಅಪ್ಪಚಟ್ಟೋಳಂಡ ಮನುಮುತ್ತಪ್ಪ ಮಾತನಾಡಿ, ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಅಶ್ವಿನಿ ಪೊನ್ನಪ್ಪ ಸೇರಿದಂತೆ ಸಾಕಷ್ಟು ಕೊಡಗಿನ ಮಂದಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದಾರೆ ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭ ಪಂದ್ಯಾವಳಿಯಲ್ಲಿ ಗೆಲವು ಸಾಧಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.