ಗೋಣಿಕೊಪ್ಪ ವರದಿ, ಏ. 21 : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ. ಕಿರುಗೂರು ಗ್ರಾಮದ ನಂಬುಡುಮಾಡ ಕಾವೇರಪ್ಪ (27) ಮೃತ ಚಾಲಕ.

ಬಾಳೆಲೆಯಲ್ಲಿ ಮದುವೆ ಮುಗಿಸಿ ಸಂಬಂಧಿಕರನ್ನು ಬಿಟ್ಟು ಬೆಂಗಳೂರಿಗೆ ಹಿಂತಿರುಗುವಾಗ ಮುಂಜಾನೆ 3.30ರ ಸುಮಾರಿಗೆ ಘಟನೆ ನಡೆದಿದೆ. ಪೊನ್ನಂಪೇಟೆ ಕಿರುಗೂರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಜೆಸಿಬಿ ಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ತಲೆಗೆ ಬಲವಾದ ಪೆಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಾವೇರಪ್ಪ ಮದುವೆಗೆಂದು ಆಗಮಿಸಿದ್ದು, ಕಿರುಗೂರು ಗ್ರಾಮದ ಸುಬ್ರಮಣಿ ಎಂಬವರ ಪುತ್ರ. -ಸುದ್ದಿಪುತ್ರ