ಶ್ರೀಮಂಗಲ, ಮೇ 4: ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಹೊಸ ಕಟ್ಟಡದ ಉದ್ಘಾಟನೆ ಮತ್ತು ವಾರ್ಷಿಕ ಸಂತೋಷ ಕೂಟ ತಾ. 7ರಂದು ಪೂರ್ವಾಹ್ನ 10 ಗಂಟೆಗೆ ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

ನೂತನ ಕಟ್ಟಡವನ್ನು ದಾನಿಗಳಾದ ಕೈಬಿಲಿರ ಬಿ. ಪಾರ್ವತಿ ಮತ್ತು ಕಟ್ಟೇರ ಎ. ವಿಶ್ವನಾಥ್ ಅವರು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕಟ್ಟೇರ ಎ. ವಿಶ್ವನಾಥ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ವೇಲ್‍ನ ಮಾಜಿ ಅಧ್ಯಕ್ಷ ಎ.ಟಿ. ರಂಗನಾಥ್, ಚಿಕ್ಕಮಂಗಳೂರು ಆಶ್ರಯ ನರ್ಸಿಂಗ್ ಆಸ್ಪತ್ರೆಯ ಡಾ. ವಿಜಯಕುಮಾರ್, ಕೊಡಗು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇಜರ್ ಜನರಲ್ ಬಾಚಮಂಡ ಎ. ಕಾರ್ಯಪ್ಪ, ಟಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಸುಮಂತ್ ಆಗಮಿಸಲಿದ್ದಾರೆ.

ಇದೇ ಸಂದರ್ಭ 2017-18ನೇ ಸಾಲಿನಲ್ಲಿ ಮಾಜಿ ಸೈನಿಕರ ಪ್ರತಿಭಾವಂತ ಮಕ್ಕಳಿಗೆ ಎಸ್.ಎಸ್.ಎಲ್.ಸಿ. ಮತ್ತು ಅಂತಿಮ ಪದವಿ ತರಗತಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ಉಳುವಂಗಡ ಎಸ್. ಗಣಪತಿ ತಿಳಿಸಿದ್ದಾರೆ.