ಮಡಿಕೇರಿ, ಮೇ 3: ಪ್ರಸಕ್ತ(2019-20) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆಯು ಈಗಾಗಲೇ ನಡೆದಿದ್ದು, ಈ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ತಾ. 10 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.

ಈ ಕೌನ್ಸಿಲಿಂಗ್‍ಗೆ ಕಟ್ ಆಫ್ ರ್ಯಾಂಕ್‍ನ ಒಳಗಿರುವ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ವರ್ಗವಾರು ಮತ್ತು ಲಿಂಗವಾರು ವಿದ್ಯಾರ್ಥಿಗಳು ಮೂಲ ಜಾತಿ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ ತಿಳಿಸಿದ್ದಾರೆ.