ಮಡಿಕೇರಿ, ಮೇ 5: ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿ ಇರುವ ಅತಿವೃಷ್ಟಿಯಿಂದ ದುರಸ್ತಿಯಾಗಿದ್ದ ಈಜುಕೊಳವು ಗುರುವಾರದಿಂದ ಪುನರ್ ಆರಂಭಗೊಂಡಿದೆ.

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಅಸ್ತವ್ಯಸ್ತಗೊಂಡಿದ್ದ ಈಜುಕೊಳವು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ರೂ. 4.5 ಲಕ್ಷ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.