ಕುಶಾಲನಗರ, ಮೇ 5: ಶ್ರೀ ಕುಲಗುರು ಹರಳಯ್ಯ ಮಹಾ ಒಕ್ಕೂಟದ ಆಶ್ರಯದಲ್ಲಿ ತಾ. 11 ರಂದು ಬಸವಣ್ಣ, ಹರಳಯ್ಯ ಹಾಗೂ ಭಗವಾನ್ ಬುದ್ಧ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಹೆಚ್.ಎಸ್. ವೆಂಕಟೇಶ್ ತಿಳಿಸಿದ್ದಾರೆ. ಕೂಡಿಗೆಯ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಡಿವೈಎಸ್ಪಿ ದಿನಕರ ಶೆಟ್ಟಿ ಉದ್ಘಾಟಿಸುವರು. ಹೆಚ್.ಎಸ್. ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಸಾಹಿತಿ ಭಾರದ್ವಾಜ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.