ಸೋಮವಾರಪೇಟೆ, ಮೇ 5: ತಾಲೂಕಿನ ಅರಸಿನಕುಪ್ಪೆ ಸಿದ್ಧಲಿಂಗಪುರದಲ್ಲಿರುವ ಶ್ರೀ ಮಂಜುನಾಥ ಮತ್ತು ನಾಗ ಸನ್ನಿಧಿಯಲ್ಲಿ ತಾ. 9ರಂದು ಪಂಚಮಿ ಪೂಜೆ ನಡೆಯಲಿದೆ. ಅಂದು ಬೆಳಗ್ಗಿನಿಂದಲೇ ನಾಗದೇವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನಂತರ ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆ ತಿಳಿಸಿದೆ.