ಸೋಮವಾರಪೇಟೆ, ಮೇ 5: ಸಮೀಪದ ತಣ್ಣೀರುಹಳ್ಳ ಗ್ರಾಮದ ಶ್ರೀ ಬಸವೇಶ್ವರ ಯುವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದ ಸಮಾರೋಪದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು.

ಸಂಘದ ಹಿರಿಯ ಸದಸ್ಯ ಕೆ. ರವಿ, ಅಂಗನವಾಡಿ ಕಾರ್ಯಕರ್ತೆ ಕುಸುಮಾವತಿ, ಅಂಗನವಾಡಿ ಸಹಾಯಕಿ ಗ್ರೇಸಿ, ನಾಟಿ ವೈದ್ಯರಾದ ಕಮಲ ಅವರುಗಳನ್ನು, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಟಿ.ಕೆ ಕಿಶೋರ್, ತಾ.ಪಂ. ಸದಸ್ಯೆ ತಂಗಮ್ಮ, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಗ್ರಾ.ಪಂ. ಅಧ್ಯಕ್ಷ ತಿಮ್ಮಯ್ಯ, ಸದಸ್ಯ ಭುವನ್, ಪ್ರಮುಖರಾದ ಗಿರೀಶ್ ಮಲ್ಲಪ್ಪ, ಪಿ.ಡಿ.ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಸನ್ಮಾನಿಸಿದರು.