ಮಡಿಕೇರಿ, ಮೇ 9 : ವೀರಾಜಪೇಟೆ ವಿದ್ಯುತ್ ಉಪ-ಕೇಂದ್ರದಿಂದ ಹೊರ ಹೋಗುವ ವೀರಾಜಪೇಟೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವದರಿಂದ ತಾ.10 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ, ವೀರಾಜಪೇಟೆ, ಬೊಯಿಕೇರಿ, ಚಿಕ್ಕಪೇಟೆ ಜಂಕ್ಷನ್, ಬೀರಂಗಾಡು ಲೇಹೌಟ್, ಕದನೂರು, ಭಗವತಿ ದೇವಸ್ಥಾನ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.