ಮಡಿಕೇರಿ, ಮೇ 17: ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾದ ಭೂ ಕುಸಿತ ಹಾಗೂ ಪ್ರವಾಹವನ್ನು ಎದುರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಬೇಕಾಗುವ ಬಗ್ಗೆ ಗೂಗಲ್ ಅರ್ಥ್ ಮ್ಯಾಫ್ ಬಳಕೆ ಬಗ್ಗೆ ಮಾಹಿತಿ ನೀಡುವ ತರಬೇತಿ ಕಾರ್ಯಗಾರವು ಇತ್ತೀಚೆಗೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಹಲವು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಷಂಶುದ್ದೀನ್ ಅವರು ಹಲವು ಮಾಹಿತಿ ನೀಡಿದರು.