ಮಡಿಕೇರಿ, ಮೇ 20: ಮಡಿಕೇರಿ ತಾಲೂಕು ಕೃಷಿ ಇಲಾಖೆ ವತಿಯಿಂದ ತಾ. 22 ರಂದು ಬೆಳಿಗ್ಗೆ 10.30 ಗಂಟೆಗೆ ಭಾಗಮಂಡಲ ಹೋಬಳಿ ಚೆಟ್ಟಿಮಾನಿ ಗ್ರಾಮದ ಸಮುದಾಯ ಭವನದಲ್ಲಿ ‘ಕೃಷಿ ಅಭಿಯಾನ’ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕೃಷಿ ಮತ್ತು ಕೃಷಿಗೆ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಮಡಿಕೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.