ಮಡಿಕೇರಿ, ಮೇ 26: ವೀರಾಜಪೇಟೆ ತಾಲೂಕಿನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 2019-20ನೇ ಸಾಲಿಗೆ ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳ ವಿವರ: ಕುಟ್ಟ, ತಿತಿಮತಿ, ಪಾಲಿಬೆಟ್ಟದ ಸರ್ಕಾರಿ ಗಿರಿಜನ ಬಾಲಕರ ನಿಲಯಗಳು, ಕುಟ್ಟ, ತಿತಿಮತಿ, ಕಾರ್ಮಾಡು ಸರ್ಕಾರಿ ಗಿರಿಜನ ಬಾಲಕಿಯರ ನಿಲಯಗಳು, ಚೆನ್ನಂಗಿ ಬಸವನಹಳ್ಳಿ, ಮರೂರು ತಿತಿಮತಿ, ನಿಟ್ಟೂರು, ಕಾರ್ಮಾಡು, ನಾಗರಹೊಳೆ, ಕೋತೂರು ಮತ್ತು ಗೋಣಿಗದ್ದೆ ಸರ್ಕಾರಿ ಗಿರಿಜನ ಆಶ್ರಮಗಳು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 1ನೇ ತರಗತಿಯಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮ ಶಾಲೆಗಳಲ್ಲಿ ಉಚಿತ ವಸತಿ, ಊಟ, ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಹ ಅನುಪಾತವಾರು ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.
ಅರ್ಜಿಗಳನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೆÇನ್ನಂಪೇಟೆ ಇಲ್ಲಿಂದ ಅಥವಾ ಸಂಬಂಧಿಸಿದ ನಿಲಯ, ಆಶ್ರಮ ಶಾಲೆಗಳ ವಾರ್ಡನ್, ಮುಖ್ಯ ಶಿಕ್ಷಕರಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ವಾರ್ಡನ್ ಹಾಗೂ ಆಶ್ರಮ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಜೂನ್ 10 ರೊಳಗೆ ಸಲ್ಲಿಸುವಂತೆ ವೀರಾಜಪೇಟೆ ತಾಲೂಕು ಪೊನ್ನಂಪೇಟೆಯ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.