ಗೋಣಿಕೊಪ್ಪ ವರದಿ, ಮೇ 27 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೊಳ್ಳಿನಮ್ಮೆ (ಬೆಳ್ಳಿಹಬ್ಬ) ಆಚರಿಸಲು ಎಲ್ಲಾ ಸಿದ್ದತೆ ನಡೆದಿದೆ ಎಂದು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ ತಿಳಿಸಿದರು.
ಇಲ್ಲಿನ ಸಿಲ್ವರ್ಸ್ಕೈ ಸಭಾಂಗಣ ದಲ್ಲಿ ಬೊಳ್ಳಿನಮ್ಮೆ ಕಾರ್ಯಕ್ರಮಗಳ ಪಟ್ಟಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಜೂನ್ 8 ಮತ್ತು 9 ರಂದು ಗೋಣಿಕೊಪ್ಪ ಕಾವೇರಿ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊಡವ ಜಾನಪದ ಸಾಂಸ್ಕøತಿಕ ಮೆರವಣಿಗೆ, ಸಾಂಸ್ಕøತಿಕ ಪ್ರದರ್ಶನ, ವಿಚಾರಗೋಷ್ಠಿ, ಕೊಡವ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳ ಮೂಲಕ ಬೊಳ್ಳಿನಮ್ಮೆಗೆ ವಿಶೇಷ ಮೆರಗು ನೀಡಲಾಗುವದು ಎಂದು ತಿಳಿಸಿದರು.
ಜೂನ್ 8 ರಂದು ಬೆ. 9 ಗಂಟೆಗೆ ಗೋಣಿಕೊಪ್ಪ ಪಾಲಿಬೆಟ್ಟ ರಸ್ತೆ ಜಂಕ್ಷನ್ನಿಂದ ಕೊಡವ ಜಾನಪದ ಸಾಂಸ್ಕøತಿಕ ಮೆರವಣಿಗೆ ಆರಂಭಗೊಳ್ಳಲಿದೆ. ಮೆರವಣಿಗೆಯನ್ನು ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ಉದ್ಘಾಟಿಸಲಿ ದ್ದಾರೆ. ಸಾಂಸ್ಕøತಿಕ ಪ್ರದರ್ಶನವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿಜಾಯ್, ಪುಸ್ತಕ ಮತ್ತು ವಸ್ತು ಪ್ರದರ್ಶನವನ್ನು ಸಿಇಒ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಲಿ ದ್ದಾರೆ ಎಂದು ತಿಳಿಸಿದರು.
ಕೊಡವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಚಂಡೆಮೇಳ, ಕಾಪಳಕಳಿ, ಉಮ್ಮತ್ತಾಟ್, ಕೋಲಾಟ್, ಪರೆಯಕಳಿ, ದುಡಿಕೊಟ್ಟ್ ಪಾಟ್, ತಾಲಿಪಾಟ್, ಉರ್ಟಿಕೊಟ್ಟ್ ಆಟ್, ಕತ್ತಿಯಾಟ್, ಬಾಳೋಪಾಟ್ ನಡೆಯಲಿದೆ. ಅಂದು ಬೆ. 10.30 ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪಮೋಯ್ಲಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಜಿ. ಬೋಪಯ್ಯ, ಎಂಎಲ್ಸಿ ಸುನಿಲ್ ಸುಬ್ರಮಣಿ, ತಾ.ಪಂ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಜ್ಜಿನಿಕಂಡ ಗಣಪತಿ, ಗ್ರಾ. ಪಂ ಅಧ್ಯಕ್ಷೆ ಸೆಲ್ವಿ, ಜಿ. ಪಂ. ಸದಸ್ಯ ಸಿ.ಕೆ. ಬೋಪಣ್ಣ, ಕೊಡವ ಸಮಾಜ ಒಕ್ಕೂಟ ಅಧ್ಯಕ್ಷ ಕಳ್ಳಿಚಂಡ ವಿಷ್ಣು, ಬೆಂಗಳೂರು ಕೊಡವ ಸಮಾಜ ಅಧ್ಯಕ್ಷ ಮುಕ್ಕಾಟೀರ ನಾಣಯ್ಯ, ಮೈಸೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ಡಾ. ಕಳ್ಳಿಚಂಡ ಲಲಿತಾ ಪಾಲ್ಗೊಳ್ಳಲಿದ್ದಾರೆ. ಸಂಜೆ 5 ಗಂಟೆಗೆ ಯಂಗ ಕಲಾರಂಗದಿಂದ ಕುರ್ಕಂಗ ನಾಟಕ ಪ್ರದರ್ಶನ, ಚೇಂದೀರ ನಿರ್ಮಲಾ ಬೋಪಣ್ಣ ತಂಡದಿಂದ ಕೊಡವ ಆರ್ಕೆಸ್ಟ್ರಾ ನಡೆಯಲಿದೆ.
ಜೂನ್ 9 ರಂದು ಬೆಳಗ್ಗೆ 9 ಕ್ಕೆ ವಿಚಾರಗೋಷ್ಠಿ ನಡೆಯಲಿದೆ. ಪ್ರೊ. ಇಟ್ಟೀರ ಕೆ. ಬಿದ್ದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಪೆರಿಯಂಡ ಜಯಂತಿ ಅವರಿಂದ ಕೊಡವ ಭಾಷೆಯನ್ನು 8 ನೇ ಪರಿಚ್ಚೇಧಕ್ಕೆ ಸೇರಿಸುವ ಬಗ್ಗೆ ವಿಚಾರಗೋಷ್ಠಿ, ಕೊಡವ ಭಾಷಿಕÀರ ನಮ್ಮೆ-ನಾಳ್ ಬಗ್ಗೆ ತೇಲಪಂಡ ಕವನ್ ಕಾರ್ಯಪ್ಪ ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಬೆ. 11 ಕ್ಕೆ ನಡೆಯಲಿರುವ ಕೊಡವ ಕವಿಗೋಷ್ಠಿಗೆ ಸಾಹಿತಿ ಚಾಮೇರ ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಚಂಗಚಂಡ ರಶ್ಮಿ ನಿತಿನ್, ಚಮ್ಮಣಮಾಡ ವಾಣಿ ರಾಘವೇಂದ್ರ, ಚಂಗುಲಂಡ ಈಶ, ನಿವ್ಯ ದೇವಯ್ಯ, ಕೋಟೇರ ಉದಯ್, ಅಪ್ಪಚೆಟ್ಟೋಳಂಡ ವನು ವಸಂತ್, ಅಂಜಪರವಂಡ ರಂಜು, ಸುಳ್ಳಿಮಾಡ ಶಿಲ್ಪ, ಕಳ್ಳಿಚಂಡ ದೀನಾ, ರಜಿತ್ ಕಾರ್ಯಪ್ಪ, ಬಟ್ಟಕಾಳಂಡ ಮುತ್ತಣ್ಣ ಕವನ ವಾಚಿಸಲಿದ್ದಾರೆ ಎಂದರು.
ಅಂದು ಮಧ್ಯಾಹ್ನ 2 ಕ್ಕೆ ಪ್ರಶಸ್ತಿ ಪ್ರಧಾನ ಹಾಗೂ ಸಮಾರೋಪ ನಡೆಯಲಿದೆ.
ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಡಾ. ಬೊವ್ವೇರಿಯಂಡ ನಂಜಮ್ಮ ಚಿಣ್ಣಪ್ಪ, ನಾಟಕ ಕ್ಷೇತ್ರದಲ್ಲಿ ಕೋಳೇರ ಸನ್ನು ಕಾವೇರಪ್ಪ, ಜಾನಪದ ಕ್ಷೇತ್ರದಲ್ಲಿ ನಾಳಿಯಮ್ಮಂಡ ಕೆ. ಅಚ್ಚಮಯ್ಯ ಅವರುಗಳು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಈ ಸಂದರ್ಭ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್, ಕೊಡವ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ, ಮಡಿಕೇರಿ ಶಾಸಕ, ಅಪ್ಪಚ್ಚುರಂಜನ್, ಶಾಸಕಿ ವೀಣಾ ಅಚ್ಚಯ್ಯ, ಕೊಡವ ಅಕಾಡೆಮಿ ಮಾಜಿ ಅಧ್ಯಕ್ಷರುಗಳಾದ ಡಾ. ಉಳ್ಳಿಯಡ ಎಂ. ಪೂವಯ್ಯ, ಬಾಚರಣಿಯಂಡ ಪಿ. ಅಪ್ಪಣ್ಣ, ಚಿರಿಯಪಂಡ ರಾಜಾ ನಂಜಪ್ಪ, ಉಳ್ಳಿಯಡ ಡಾಟಿ ಪೂವಯ್ಯ, ಐಮುಡಿಯಂಡ ರಾಣಿ ಮಾಚಯ್ಯ, ಅಡ್ಡಂಡ ಸಿ. ಕಾರ್ಯಪ್ಪ, ಬಿದ್ದಾಟಂಡ ಎಸ್., ತಮ್ಮಯ್ಯ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ಪಟ್ಟಿ ಬಿಡುಗಡೆ ಸಂದರ್ಭ ಕೊಡವ ಅಕಾಡೆಮಿ ಸದಸ್ಯರುಗಳಾದ ಆಪಟ್ಟೀರ ಟಾಟು ಮೊಣ್ಣಪ್ಪ, ಅಜ್ಜಮಾಡ ಪಿ. ಕುಶಾಲಪ್ಪ, ಬೀಕಚಂಡ ಎಂ. ಬೆಳ್ಯಪ್ಪ, ತೋರೇರ ಎಂ. ಮುದ್ದಯ್ಯ, ನಾಳಿಯಮ್ಮಂಡ ಕೆ. ಉಮೇಶ್, ಆಂಗೀರ ಕುಸುಂ, ಬೊಳ್ಳಜೀರ ಅಯ್ಯಪ್ಪ, ಹಂಚೇಟೀರ ಮನು ಮುದ್ದಪ್ಪ, ಸುಳ್ಳಿಮಾಡ ಭವಾನಿ ಕಾವೇರಿಯಪ್ಪ, ಹಂಚೇಟೀರ ಫ್ಯಾನ್ಸಿ ಮುತ್ತಣ್ಣ, ಮನ್ನಕಮನೆ ಬಾಲಕೃಷ್ಣ ಇದ್ದರು.
-ಸುದ್ದಿಪುತ್ರ