ಮಡಿಕೇರಿ, ಜೂ. 2 : ಗ್ರಾಮ ಪಂಚಾಯಿತಿ ನೌಕರರನ್ನು ಏಕಕಾಲದಲ್ಲಿ ಖಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡಗು ಜಿಲ್ಲೆಯ ಗ್ರಾ.ಪಂ ನೌಕರರು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಪರ ಕಾರ್ಯದರ್ಶಿ ಸ್ವಾಮಿ ಅವರ ವರದಿಯಂತೆ ಎಲ್ಲಾ ನೌಕರರನ್ನು ಏಕಕಾಲದಲ್ಲಿ ಅನುಮೋದನೆ ಮಾಡಬೇಕು. ಕಳೆದ ಒಂದು ವರ್ಷದಿಂದ ಬಾಕಿ ಉಳಿದ ವೇತನ ಇಎಫ್‍ಎಂಎಸ್‍ಗೆ ಸೇರದಿರುವವರಿಗೆ ತೆರಿಗೆ ಸಂಗ್ರಹದಲ್ಲಿ ಕೊಡುವಂತಾಗಬೇಕು. ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ಉಪಧನ ನೀಡಬೇಕು. ಎಂಬಿತ್ಯಾದಿ ಬೇಡಿಕೆಗಳ ಮನವಿ ಪತ್ರವನ್ನು ಪ್ರತಿಭಟನಾಕಾರರು ಜಿ.ಪಂ ಅಧಿಕಾರಿಗಳಿಗೆ ನೀಡಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ಉಪಾಧ್ಯಕ್ಷ ಟಿ.ಕೆ.ಮೂರ್ತಿ, ತಾಲೂಕು ಖಜಾಂಚಿ ವಂಸತ್, ಕಾರ್ಯದರ್ಶಿ ಪವಿತ್ರ, ಸದಸ್ಯ ವಿಜಯ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.