ಮಡಿಕೇರಿ, ಜೂ. 4: ಕೃಷಿ ಇಲಾಖೆ ವತಿಯಿಂದ ತಾ. 7 ರಂದು ನಾಪೋಕ್ಲು ಹೋಬಳಿಯ ಚೆಯ್ಯಂಡಾಣೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ‘ಕೃಷಿ ಅಭಿಯಾನ’ ಕಾರ್ಯಕ್ರಮ ನಡೆಯಲಿದೆ.

ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸ್ಥಳೀಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಡಿಕೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.