ಮಡಿಕೇರಿ, ಜೂ. 10: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ವತಿಯಿಂದ ತಾ. 11 ರಂದು (ಇಂದು) ಬೆಳಗ್ಗೆ 11.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸ್ವಚ್ಛ ಮೇವ ಜಯತೆ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್ ಇತರರು ಪಾಲ್ಗೊಳ್ಳಲಿದ್ದಾರೆ.