ಸೋಮವಾರಪೇಟೆ, ಜೂ. 11: ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಗುರುತಿಸಲಾದ ಫಲಾನುಭವಿಗಳಿಗೆ ಶಾಸಕ ಅಪ್ಪಚ್ಚು ರಂಜನ್ ಅವರು ಅಡುಗೆ ಅನಿಲ ಸಿಲಿಂಡರ್ ವಿತರಿಸಿದರು. ಶಾಸಕರ ಕಚೇರಿಯಲ್ಲಿ ಒಟ್ಟು 24 ಫಲಾನು ಭವಿಗಳಿಗೆ ಅಡುಗೆ ಅನಿಲ ವಿತರಿಸಿ ಮಾತನಾಡಿದ ರಂಜನ್, ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಿಂದ ದೇಶಾದ್ಯಂತ ಮಹಿಳೆಯರಿಗೆ ಅನುಕೂಲವಾಗಿದೆ ಎಂದರು. ಈ ಸಂದರ್ಭ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸದಸ್ಯ ಬಿ.ಡಿ. ಮಂಜುನಾಥ್, ಪ್ರಮುಖರಾದ ಮಾಲಂಬಿ ಗಂಗಾಧರ್, ಲೀಲಾ ನಿರ್ವಾಣಿ, ಸೋಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.