ಸಂಪಾಜೆ, ಜೂ, 11: ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್ ಮತ್ತು ಸಂಘಟನಾ ಸಮಿತಿ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಇವುಗಳ ಜಂಟಿ ಆಶ್ರಯದಲ್ಲಿ ಎರಡು ದಿನಗಳ ಕಾಲ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆಹ್ವಾನಿತ ತಂಡಗಳಿಂದ ಲಗೋರಿ ಪಂದ್ಯಾಟದಲ್ಲಿ ಪ್ರಥಮಸ್ಥಾನವನ್ನು ಹನುಮಾನ್ ಲಗೋರಿಯನ್ ಮಂಗಳೂರು, ದ್ವಿತೀಯ ಸ್ಥಾನವನ್ನು ಯುವಶಕ್ತಿ ಪೆರಾಜೆ ಪಡೆದುಕೊಂಡಿತು.
ಭಾನುವಾರ ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎ.ಪಿ.ಎಂ.ಸಿ ಅಧ್ಯಕ್ಷ ಹಾಗೂ ಲಗೋರಿ ಸಂಘಟನಾ ಸಮಿತಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ವಹಿಸಿದರು.
ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯಕಲ್ತಡ್ಕ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ.ಎನ್.ಎ.ಜ್ಞಾನೇಶ, ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸುಳ್ಯ ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ನಗರ ಪಂಚಾಯಿತಿ ಮಾಜಿ ಸದಸ್ಯ ಮುಸ್ತಫ, ಜಿಲ್ಲಾ ಲಗೋರಿ ಅಸೋಸಿಯೇಶನ್ನ ಬಿ.ಕೆ.ಮಾದವ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಲಗೋರಿ ಆಟ ರಚನೆಗಾರ ದೊಡ್ಡಣ್ಣ ಬರೆಮೇಲು ಅವರನ್ನು ಸನ್ಮಾನಿಸ ಲಾಯಿತು. ವೇದಿಕೆಯಲ್ಲಿ ಸಮಿತಿ ಸಂಯೋಜಕ ದಿನೇಶ್ ಮಡಪ್ಪಾಡಿ ಇದ್ದರು. ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್ನ ಪ್ರಧಾನ ಕಾರ್ಯದರ್ಶಿ ಹಾಗೂ ಪಂದ್ಯಾಟದ ಪ್ರಧಾನ ಸಂಯೋಜಕ ರಾದ ದೊಡ್ಡಣ್ಣ ಬರೆಮೇಲು ವಂದಿಸಿದರು. ಎಂ.ಜೆ.ಶಶಿಧರ್ ಕಾರ್ಯಕ್ರಮ ನಿರೂಪಿಸಿದರು.
ಪಂದ್ಯಾಟದಲ್ಲಿ ರಾಜ್ಯದ ಮೈಸೂರು, ಮಂಡ್ಯ, ಕಾರವಾರ, ಬೆಂಗಳೂರು, ಶಿವಮೊಗ್ಗ, ಕೊಡಗಿ ನಿಂದ ಒಟ್ಟು 12ತಂಡ ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಹನುಮಾನ್ ಲಗೋರಿಯನ್ ಮಂಗಳೂರು, ದ್ವಿತೀಯ ಸ್ಥಾನವನ್ನು ಯುವಶಕ್ತಿ ಪೆರಾಜೆ, ತೃತೀಯ ಸ್ಥಾನವನ್ನು ಪಂಚಶ್ರೀ ಪಂಜ, ಚತುರ್ಥ ಸ್ಥಾನವನ್ನು ಪ್ರಗತಿ ಫ್ರ್ರೆಂಡ್ಸ್ ಕಾಣಿಯೂರು ತಂಡ ಪಡೆದುಕೊಂಡಿತು. ಎಲ್ಲ ತಂಡಗಳಿಗೆ ನಗದು ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.
-ವರದಿ: ಗಿರೀಶ್ ಪೆರಾಜೆ