ಕುಶಾಲನಗರ, ಜೂ. 11: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಮಡಿಕೇರಿಯಲ್ಲಿ ಮಾಧ್ಯಮದವರ ಮೇಲೆ ಹರಿಹಾಯ್ದ ಘಟನೆ ಖಂಡಿಸಿ ಕುಶಾಲನಗರದಲ್ಲಿ ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಕುಶಾಲನಗರ ಪ್ರೆಸ್‍ಕ್ಲಬ್ ಟ್ರಸ್ಟ್‍ನ ಅಧ್ಯಕ್ಷ ಎಚ್.ಎಂ.ರಘು ಅವರ ನೇತೃತ್ವದಲ್ಲಿ ಪಟ್ಟಣದ ಕಾರ್ಯಪ್ಪ ವೃತ್ತದಲ್ಲಿ ಸೇರಿದ ಸದಸ್ಯರು ಸಚಿವರ ವರ್ತನೆಯನ್ನು ಖಂಡಿಸಿ ತಕ್ಷಣ ಮಾಧ್ಯಮದವರ ಬಳಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.