ಕುಶಾಲನಗರ, ಜೂ. 11: ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಟಿ.ಆರ್. ಶರವಣಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡನೆ ನಡೆಯಿತು.

ಸಭೆಯಲ್ಲಿ ಗುಂಪುವಿಮೆ, ಕಾರು ಚಾಲಕರು ಮಾಲೀಕರ ಸಹಕಾರ ಸಂಘದಿಂದ ಬರಬೇಕಾದ ರೂ. 3.81 ಲಕ್ಷಗಳ ವಸೂಲಾತಿ ಮತ್ತು ಇತರ ವಿಚಾರಗಳ ಕುರಿತಾಗಿ ಚರ್ಚೆ ನಡೆಯಿತು.

ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಧನ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ನಡೆಯಿತು. ಸಂಘದ ಉಪಾಧ್ಯಕ್ಷ ಪಿ. ಕಾರ್ತೀಶನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸೇರಿದಂತೆ ನಿರ್ದೇಶಕರು, ಸದಸ್ಯರು ಇದ್ದರು.