ಸಿದ್ದಾಪುರ, ಜೂ.15: ನೆಲ್ಯಹುದಿಕೇರಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸತ್ಯನಾರಾಯಣ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವು ತಾ. 16 ರಿಂದ (ಇಂದಿನಿಂದ) ತಾ. 21 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ತಾ. 16 ರಂದು ಬೆಳಿಗ್ಗೆ 9.30 ಗಂಟೆಯಿಂದ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಲಿದ್ದು, ತಾ. 21 ರಂದು ಬೆಳಿಗ್ಗೆ 5 ಗಂಟೆಗೆ ಮಹಾಗಣಪತಿ ಹೋಮ, ಪರಿಕಲಶಾಭಿಷೇಕ, 9 ರಿಂದ 9.45 ರವರೆಗೆ ಶ್ರೀ ಸತ್ಯನಾರಾಯಣ ದೇವರಿಗೆ ಅಷ್ಟಬಂಧ ಕ್ರಿಯೆ, ಬ್ರಹ್ಮಕಲಶಾಭಿಷೇಕ, ಶಾಸ್ತಾರ ದೇವರ ಪ್ರತಿಷ್ಟೆ ಕಲಶಾಭಿಷೇಕ ನಡೆಯಲಿದ್ದು, ಮದ್ಯಾಹ್ನ 12 ಗಂಟೆಗೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.