ಮಡಿಕೇರಿ, ಜೂ.15: ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ತಾ. 19 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಅಂದು ಬೆಳಿಗ್ಗೆ 8 ಗಂಟೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ/ ಬರಪೀಡಿತ ಪ್ರದೇಶಗಳಿಗೆ ಭೇಟಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳು ಮತ್ತು ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಲಾಗುವ ಮನೆ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ. ನಂತರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಹ/ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ತಾ. 16ರಂದು (ಇಂದು) ವಸತಿ ಸಚಿವರು ಕೈಗೊಂಡಿದ್ದ ಪ್ರವಾಸ ಮುಂದೂಡಲ್ಪಟ್ಟಿದೆ.