ಕುಶಾಲನಗರ, ಜೂ. 15: ಚಲಿಸುತ್ತಿದ್ದ ಬಸ್‍ನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಕುಶಾಲನಗರ ಸಮೀಪ ಮಾದಾಪಟ್ಟಣ ಬಳಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ (ಕೆಎ.19.ಎಫ್.2991) ಕಾವೇರಿ ನಿಸರ್ಗಧಾಮ ಪ್ರವಾಸಿ ಕೇಂದ್ರದ ಬಳಿ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬೈಲುಕೊಪ್ಪೆಯ ಮಹಿಳೆ ಕಾಳಮ್ಮ (60) ಎಂಬಾಕೆ ಆಸ್ಪತ್ರೆ ಸೇರಿದ ಮಹಿಳೆಯಾಗಿದ್ದು ಕುಶಾಲನಗರದಿಂದ ಬಸ್‍ನಲ್ಲಿ ತೆರಳುತ್ತಿದ್ದ ವೇಳೆ ಬಸ್‍ನ ಬಾಗಿಲು ಅಕಸ್ಮಾತ್ ತೆರೆದುಕೊಂಡ ಹಿನೆÀ್ನಲೆಯಲ್ಲಿ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸಲಾಗಿದೆ. ಮಹಿಳೆ ಕೂಲಿ ಕೆಲಸಕ್ಕೆ ಬಸ್‍ನಲ್ಲಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೋಮಾ ಸ್ಥಿತಿಯಲ್ಲಿರುವ ಮಹಿಳೆಯ ಹೆಚ್ಚಿನ ಚಿಕಿತ್ಸೆಗೆ ಸಾರಿಗೆ ಇಲಾಖೆ ರೂ. 15 ಸಾವಿರ ಪರಿಹಾರ ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.