ಮಡಿಕೇರಿ, ಜೂ. 15 : ಗುಂಡ್ಲುಪೇಟೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನು ಬೆತ್ತಲೆ ಮೆರÀವಣಿಗೆ ಮಾಡಿರುವ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಹುಜನ ಸಮಾಜ ಪಾರ್ಟಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಬಿಎಸ್‍ಪಿ ಕಾರ್ಯಕರ್ತರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

ಬಿಎಸ್‍ಪಿ ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ, ಜಿಲ್ಲಾ ವಕ್ತಾರÀ ಬಸವರಾಜ್, ಖಜಾಂಚಿ ಹೆಚ್.ಎಸ್. ದಿಲೀಪ್ ಕುಮಾರ್, ಮಡಿಕೇರಿ ತಾಲೂಕು ಅಧ್ಯಕ್ಷ ಪೂವಣ್ಣಿ, ನಗರ ಪ್ರಧಾನ ಕಾರ್ಯದರ್ಶಿ ಗಣೇಶ್, ಪ್ರಮುಖರಾದ ದೊರೆ ಮಣಿ, ಗಣೇಶ್, ಆನೆರಾಜು, ಜಯರಾಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.