*ಗೋಣಿಕೊಪ್ಪಲು, ಜೂ. 21: 3ನೇ ವಿಭಾಗಕ್ಕೆ ನೀರು ಪೂರೈಸುವ ಟ್ಯಾಂಕ್ ತುಂಬಿ ನೀರು ಪೆÇೀಲಾಗುತ್ತಿದ್ದರೂ ನೀರು ಗಂಟಿ ಈ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ತೋರುತ್ತಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.

ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ 3ನೇ ವಿಭಾಗಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ತೊಟ್ಟಿ ತುಂಬಿ ಹೊರ ಚೆಲ್ಲುತ್ತಿದ್ದರೂ ಈ ಬಗ್ಗೆ ನೀರು ಗಂಟಿಯಾದ ಸುರೇಶ್ ಗಮನ ಹರಿಸದೆ ನೀರು ವ್ಯರ್ಥವಾಗಿ ಪೆÇೀಲಾಗುತ್ತಿತ್ತು. ಸುಮಾರು ಎರಡು ಗಂಟೆಗಳ ಕಾಲ ನೀರು ಹೀಗೆ ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ನೀರು ಬಿಡುವ ಗೇಟ್ ವಾಲ್‍ಗೆ ಬೀಗ ಹಾಕಿರುವದರಿಂದ ನೀರು ಹರಿಯುವದನ್ನು ನಿಲ್ಲಿಸಲು ಸಾಧ್ಯವಾಗಲಿಲ್ಲ. ಹಲವು ಬಾರಿ ಗ್ರಾ.ಪಂ. ಅಧ್ಯಕ್ಷೆ ಹಾಗೂ ಸದಸ್ಯರುಗಳು ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಕೊನೆಗೆ ಬೀಗ ಒಡೆದು ಮೋಟಾರನ್ನು ಸ್ಥಗಿತಗೊಳಿಸಲಾಯಿತು. ಕಳೆದ ಮೂರು ದಿನಗಳ ಹಿಂದೆ ಮೂರನೇ ವಿಭಾಗಕ್ಕೆ ನೀರು ಬರುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿ ಪಂಚಾಯಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.