ಮಡಿಕೇರಿ, ಜೂ. 25: ವಸತಿ ಸಚಿವ ಎನ್. ನಾಗರಾಜ ಎಂ.ಟಿ.ಬಿ. ಅವರು ತಾ. 29 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ತಾ. 29 ರಂದು ಬೆಳಿಗ್ಗೆ 11 ಗಂಟೆಗೆ ಜಂಬೂರು, ಮಧ್ಯಾಹ್ನ 12.15 ಗಂಟೆಗೆ ಕರ್ಣಂಗೇರಿ ಹಾಗೂ ಮಧ್ಯಾಹ್ನ 1 ಗಂಟೆಗೆ ಮಡಿಕೇರಿ ತಾಲೂಕಿನ ಮದೆ ಈ ಗ್ರಾಮಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನಿರಾಶ್ರಿತರಿಗೆ ನಿರ್ಮಿಸಲಾಗುತ್ತಿರುವ ವಸತಿ ಕಾಮಗಾರಿಗಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಎಂ.ಕೆ. ಜಗದೀಶ್ ಅವರು ತಿಳಿಸಿದ್ದಾರೆ.