ಮಡಿಕೇರಿ, ಜೂ. 27 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಗಮ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಚೇರಿ ನಿರ್ವಹಣೆ ಹಾಗೂ ಸಾಲ ಮನ್ನಾ ಯೋಜನೆ ಕುರಿತು ಶಿಕ್ಷಣ ಕಾರ್ಯಕ್ರಮವು ತಾ. 28 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ.

ಸಹಕಾರ ಯೂನಿಯನ್ ನಿಗಮದ ಅಧ್ಯಕ್ಷರು, ಸಹಕಾರ ಕೇಂದ್ರ ಬ್ಯಾಂಕ್ ನಿಗಮದ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಗಮದ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ, ಸಹಕಾರ ಯೂನಿಯನ್ ನಿಗಮದ ಉಪಾಧ್ಯಕ್ಷ ಪಿ.ಸಿ. ಅಚ್ಚಯ್ಯ, ಸಹಕಾರ ಯೂನಿಯನ್ ನಿಗಮದ ನಿರ್ದೇಶಕಿ ಎಂ.ಪ್ರೇಮ ಸೋಮಯ್ಯ, ಎಚ್.ಎನ್. ರಾಮಚಂದ್ರ, ಬಿ.ಎ. ರಮೇಶ್ ಚಂಗಪ್ಪ, ಕೆ.ಎಸ್.ಗಣಪತಿ, ಪಿ.ಜಿ. ನಂಜುಂಡ, ಎನ್.ಎ.ರವಿ ಬಸಪ್ಪ, ಕನ್ನಂಡ ಸಂಪತ್, ಸಿ.ಎಸ್.ಗಣಪತಿ, ಮಡಿಕೇರಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಡಿ. ರವಿಕುಮಾರ್, ಸೋಮವಾರಪೇಟೆ ತಾ. ನಿವೃತ್ತ ತಹಶೀಲ್ದಾರ್ ಬಿ.ಎಸ್.ಹಿರಿಯಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.