ಮಡಿಕೇರಿ, ಜು. 3: ಕನ್ನಡ ಸಾಹಿತ್ಯ ಪರಿಷತ್ತು 2019-20ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2019ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆ ದಿನವಾಗಿದೆ. ಸೆಪ್ಟೆಂಬರ್, 15 ರವರೆಗೆ ದಂಡ ಶುಲ್ಕ ರೂ.50 ವನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ 30 ರೂ. ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25 ಗಳನ್ನು ಪ್ರತ್ಯೇಕವಾಗಿ ಪಾವತಿಸುವದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂ.ಸಂ.080-26623584 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ತಿಳಿಸಿದ್ದಾರೆ.