ಸೋಮವಾರಪೇಟೆ, ಜು. 5: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿ ವರ್ಷ ನೀಡಲಾಗುತ್ತಿರುವ ವಾರ್ಷಿಕ ಪ್ರಶಸ್ತಿಗೆ ವರದಿಗಳನ್ನು ಆಹ್ವಾನಿಸಲಾಗಿದೆ.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್ಕುಮಾರ್ ಅಧ್ಯಕ್ಷತೆಯಲ್ಲಿ ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ, ತಾಲೂಕಿನ ಪತ್ರಕರ್ತರಿಂದ ವಾರ್ಷಿಕ ಪ್ರಶಸ್ತಿಗೆ ವರದಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.
ತಾಲೂಕು ಸಂಘದ ಮಾಜೀ ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ ತಮ್ಮ ತಂದೆ-ತಾಯಿ ತೇಲಪಂಡ ಶಾರದಾ ಮತ್ತು ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ಮೌಲ್ಯವುಳ್ಳ ವರದಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ತಮ್ಮ ತಂದೆ ಹೆಚ್.ಎಸ್.ರಾಮೇಗೌಡ ಹೆಸರಿನಲ್ಲಿ ಸ್ಥಾಪಿಸಿದ ಅತ್ಯುತ್ತಮ ಗ್ರಾಮೀಣ ವರದಿ ವಿಭಾಗಕ್ಕೆ ವರದಿಗಳನ್ನು ಆಹ್ವಾನಿಸಲಾಗಿದೆ.
ಇದರೊಂದಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ತಮ್ಮ ತಂದೆ-ತಾಯಿ ಬಿ.ಕೆ.ಸುಬ್ಬಯ್ಯ- ಜಯಮ್ಮ ಹೆಸರಿನಲ್ಲಿ ಪ್ರಾರಂಭಿಸಿರುವ ಅರಣ್ಯ-ಪರಿಸರ ಮತ್ತು ವನ್ಯ ಜೀವಿ ವಿಭಾಗದ ವರದಿ, ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಎ.ಮುರುಳೀಧರ್ ತಮ್ಮ ಸಹೋದರ ಗಣೇಶ್ ಹೆಸರಿನಲ್ಲಿ ಪ್ರಾರಂಭಿಸಿರುವ ಅತ್ಯುತ್ತಮ ಕ್ರೀಡಾವರದಿ ಹಾಗೂ ಕುಶಾಲನಗರದ ಪತ್ರಕರ್ತ ಎಂ.ಎನ್. ಚಂದ್ರಮೋಹನ್ ತಮ್ಮ ತಂದೆ ತಾಯಿ ಎಂ.ನಾರಾಯಣ ಮತ್ತು ಎಂ.ಪದ್ಮಾವತಿ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ತನಿಖಾ ವರದಿಗೆ ತಾಲೂಕಿನ ಪತ್ರಕರ್ತರುಗಳಿಂದ ವರದಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ತಾಲೂಕಿನ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ವರದಿಗಳು 2018ರ ಜನವರಿ 1 ರಿಂದ 2018 ಡಿಸೆಂಬರ್ 31ರೊಳಗೆ ಪ್ರಕಟಗೊಂಡಿರಬೇಕು. ಅರ್ಜಿ ಸಲ್ಲಿಸುವವರು ತಾ. 12ರೊಳಗಾಗಿ 2 ಭಾವಚಿತ್ರ ಸಹಿತ 3 ಪ
್ರತಿಗಳೊಂದಿಗೆ ಸೋಮವಾರಪೇಟೆಯ ಪತ್ರಿಕಾ ಭವನ ಕಚೇರಿಗೆ ತಲಪಿಸಬೇಕು. ಹೆಚ್ಚಿನ ವಿವರÀಗಳಿಗೆ ಸಂಘದ ಕಾರ್ಯದರ್ಶಿ ವಿಜಯ್ ಹಾನಗಲ್ (ಮೊ:9008346234) ಖಜಾಂಚಿ ಬಿ.ಎ. ಭಾಸ್ಕರ್ (ಮೊ: 9972717450) ಅವರುಗಳನ್ನು ಸಂಪರ್ಕಿಸಬಹುದು.