ಕೂಡಿಗೆ, ಜು. 20: ಕೂಡಿಗೆಯ ಕೃಷಿ ಕ್ಷೇತ್ರದ ಆವರಣದ ರಸ್ತೆಯು ತೀರಾ ಹಾಳಾಗಿದ್ದು, ರಸ್ತೆಯ ದುರಸ್ತಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೃಷಿ ಇಲಾಖೆಯ ಆವರಣದಲ್ಲಿ ವಿವಿಧ ಇಲಾಖೆಗಳಿದ್ದು, ನೂರಾರು ವಾಹನಗಳು ಹಾಗೂ ನೌಕರ ವರ್ಗದವರು ರಸ್ತೆಯಲ್ಲಿ ಸಂಚರಿಸಲು ತೊಂದರೆ ಉಂಟಾಗುತ್ತಿದೆ. ರಸ್ತೆ ದುರಸ್ತಿ ಕಾರ್ಯ ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟದ್ದು ಎಂದು ಕೃಷಿ ಇಲಾಖೆಯವರು ನಿರ್ಲಕ್ಷಿಸುತ್ತಿದ್ದಾರೆ.
ಕೃಷಿ ಇಲಾಖೆಯ ಸ್ಥಳವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಹಾಗೂ ಕ್ರೀಡಾ ಶಾಲೆಗೆ ನೀಡಿದ್ದು, ಮಿನಿ ವಿಮಾನ ನಿಲ್ದಾಣಕ್ಕೆ ಜಾಗವನ್ನು ಮೀಸಲಿಡಲು ಉನ್ನತ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲಾಗಿದೆ. ಯಾರೂ ಕೂಡಾ ರಸ್ತೆ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.