ಸೋಮವಾರಪೇಟೆ, ಜು. 19: ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಕರ ಗ್ರಾಮದ ಅಂಗನವಾಡಿಯಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇಂದೂಧರ್ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಆರೋಗ್ಯದಲ್ಲಿ ಪೌಷ್ಟಿಕಾಂಶದ ಹಾಗೂ ಎದೆಹಾಲಿನ ಪ್ರಾಮುಖ್ಯತೆ, ಗರ್ಭಿಣಿಯರ ಆರೈಕೆ, ಮಕ್ಕಳಿಗೆ ಲಸಿಕೆ ಹಾಕಿಸುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಮಹೇಶ್, ಇಂದಿರಾ, ಶೈಲಾ, ವಿಂದ್ಯಾ, ಆಶಾ ಕಾರ್ಯಕರ್ತೆಯರಾದ ಶೈಲಾ, ಪ್ರೇಮ, ಅಂಗನವಾಡಿ ಕಾರ್ಯಕರ್ತೆಯರಾದ ಹೇಮಲತಾ, ಇಂದಿರಮ್ಮ, ಪುಷ್ಪಾವತಿ, ವಿಜಯಲಕ್ಷ್ಮಿ ಮತ್ತಿತರರು ಇದ್ದರು. ಆರೋಗ್ಯವಂತ ಶಿಶುಗಳಿಗೆ ಬಹುಮಾನ ವಿತರಿಸಲಾಯಿತು.